ಹಿರಿಯ ಪತ್ರಕರ್ತ ಎನ್.ಸಿ.ಗುಂಡೂರಾವ್ ನಿಧನ : ಸಂತಾಪ ಸೂಚಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಿರಿಯ ಪತ್ರಕರ್ತ ಮತ್ತು ಡೆಕ್ಕನ್ ಹೆರಾಲ್ಡ್‌ನ ಮಾಜಿ ಸಹ ಸಂಪಾದಕ ಎನ್‌ಸಿ ಗುಂಡೂ ರಾವ್ (78) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಪುತ್ರಿ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯವರಾದ ಗುಂಡೂ ರಾವ್ ಅವರು 2005 ರಲ್ಲಿ ಸಹಾಯಕ ಸಂಪಾದಕರಾಗಿ ಸೇವೆಯಿಂದ ನಿವೃತ್ತರಾದರು.

ಗುಂಡೂರಾವ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ಫ್ರೂವ್ ರೀಡರ್ ಆಗಿ ವೃತ್ತಿಜೀವನ‌ ಆರಂಭಿಸಿದ್ದ ಗುಂಡೂರಾವ್ ಅವರು ನಂತರ ಪತ್ರಿಕೆಯ ಸಹಸಂಪಾದಕರಾಗಿ ನಿವೃತ್ತರಾಗಿದ್ದರು ಎನ್ನುವುದು ಅವರಲ್ಲಿನ ವೃತ್ತಿಪರತೆ – ಬದ್ಧತೆಗೆ ನಿದರ್ಶನ.

ಈ ಪತ್ರಿಕೆಯಲ್ಲಿ ಹೆಚ್ಚು ಕಡಿಮೆ ನಾಲ್ಕು ದಶಕಗಳ ಕಾಲ ವೃತ್ತಿನಿರತರಾಗಿದ್ದ ಗುಂಡೂರಾವ್ ಅವರ ರಾಜಕೀಯ ವರದಿಗಾರಿಕೆ ಮತ್ತು ಅಂಕಣ ಬರಹಗಳು ಆ ಕಾಲದಲ್ಲಿ ನನ್ನಂತಹವರಿಗೆ ಮಾರ್ಗದರ್ಶನ ನೀಡುತ್ತಿತ್ತು.

ಸರಳ ಮತ್ತು ಸಜ್ಜನರಾಗಿದ್ದ ಗುಂಡೂರಾವ್ ಅವರು ವೃತ್ತಿಧರ್ಮವನ್ನು ಒಂದು ವ್ರತದಂತೆ ಪಾಲಿಸಿಕೊಂಡು ಬಂದವರು. ಮಾಧ್ಯಮರಂಗದ ಇಂದಿನ ಪೀಳಿಗೆಗೆ ಇವರ ಬದುಕು ಮತ್ತು ಸಾಧನೆ ಪ್ರೇರಣೆ ನೀಡಲಿ ಎಂದು ಆಶಿಸುತ್ತೇನೆ ಎಂದು ಬರೆದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!