ಹಿರಿಯ ನಾಯಕರು ಸತ್ಯವನ್ನೇ ಹೇಳುತ್ತಾರೆ: ಕೈ ‘ತಲೆಮಾರು’ ಹೇಳಿಕೆಗೆ ಕುಟುಕಿದ ಸುಧಾಕರ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಲ್ಕು ತಲೆಮಾರಿಗಾಗುವಷ್ಟು ಆಸ್ತಿಯನ್ನು ಕಾಂಗ್ರೆಸ್‌ನ ಪ್ರತಿಯೊಬ್ಬರೂ ಮಾಡಿದ್ದಾರೆ. ಇದನ್ನು ಈಗ ಅವರೇ ಹೇಳುತ್ತಿದ್ದಾರೆ ಎಂದು ಸಚಿವ ಡಾ. ಕೆ. ಸುಧಾಕರ್ ಲೇವಡಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರಿನಲ್ಲಿಯೂ ಆಸ್ತಿ ಮಾಡಿದ್ದಾರಂತೆ. ಇನ್ನು ಈ ಬಗ್ಗೆ ನಾನು ಹೇಳುವುದೇನಿದೆ ಎಂದು ಪ್ರಶ್ನಿಸಿದರು.

ಭ್ರಷ್ಟಾಚಾರ, ಹಗರಣಗಳ ಬಗ್ಗೆಯೂ ಅವರೇ ಹೇಳಿದ್ದಾರೆ. ಇಷ್ಟಕ್ಕೂ ಹಿರಿಯ ನಾಯಕರು ಸತ್ಯವನ್ನೇ ಹೇಳುತ್ತಾರೆ ಎಂದು ಚಾಟಿ ಬೀಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!