August 27, 2026
Thursday, August 27, 2026
spot_img

ನೆಲಮಂಗಲ ಹೆದ್ದಾರಿಯಲ್ಲಿ ಸರಣಿ ಅಪಘಾತ: ಕೆಟ್ಟು ನಿಂತ ಲಾರಿಗೆ ಕಾರು, ಟ್ರಕ್ ಡಿಕ್ಕಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯ ರಾಯರಪಾಳ್ಯ ಸಮೀಪ ಮಂಗಳವಾರ ಸರಣಿ ಅಪಘಾತ ಸಂಭವಿಸಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

ಹೆದ್ದಾರಿಯಲ್ಲಿ ತಾಂತ್ರಿಕ ದೋಷದಿಂದ ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಅದರ ಬೆನ್ನಲ್ಲೇ ಮತ್ತೊಂದು ಟ್ರಕ್ ಕೂಡ ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಘಟನೆಯ ಬಳಿಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ನಿಧಾನಗೊಂಡು ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ನೆಲಮಂಗಲ ಸಂಚಾರಿ ಪೊಲೀಸರು ಪರಿಶೀಲನೆ ನಡೆಸಿ ವಾಹನಗಳ ತೆರವು ಕಾರ್ಯ ಕೈಗೊಂಡರು.

ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !