ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸರಣಿ ಸ್ಫೋಟ ಪ್ರಕರಣದಲ್ಲಿ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು ಪೊಲೀಸರಿಗೆ ಶರಣಾಗಿದ್ದಾನೆ.
ಈ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗ್ಗೆ ಕ್ರಿಶ್ಚಿಯನ್ನರ ಸಭೆಯೊಂದರ ಸಮಯದಲ್ಲಿ ಟಿಫಿನ್ ಬಾಕ್ಸ್ನಿಂದ ಮೊದಲ ಸ್ಫೋಟ ಸಂಭವಿಸಿತ್ತು.
ಮೀನಹಿಲೆ ಎಂಬ ಕೊಚ್ಚಿಯ ವ್ಯಕ್ತಿ ಕನ್ವೆನ್ಷನ್ ಸೆಂಟರ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಒಪ್ಪಿಕೊಂಡು ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರು ವ್ಯಕ್ತಿಯನ್ನು ಕೊಚ್ಚಿಯಿಂದ ಕರೆದೊಯ್ದಿದ್ದಾರೆ, ಆತ ಯಾವುದಾದರೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದಾರೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಕೇರಳದ ಎರ್ನಾಕುಲಂನ ಕ್ರಿಶ್ಚಿಯನ್ ಧಾರ್ಮಿಕ ಸಭೆಯೊಂದರಲ್ಲಿ ಸರಣಿ ಸ್ಫೋಟ ಸಂಭವಿಸಿದೆ. ಕನ್ವೆನ್ಷನ್ ಸೆಂಟರ್ ಒಳಗೆ ಟಿಫಿನ್ ಬಾಕ್ಸ್ನಲ್ಲಿ ಸ್ಫೋಟಕಗಳಿತ್ತು, ಬೆಳಗ್ಗೆ 9.40ಕ್ಕೆ ಮೊದಲ ಸ್ಫೋಟ ಸಂಭವಿಸಿದೆ ಎನ್ನುವ ವಿಚಾರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.