ರಾಜ್ಯದಲ್ಲಿ ಸರಣಿ ಬಾಣಂತಿಯರ ಸಾವು: ಡೆತ್​ ಆಡಿಟ್​​ ವರದಿ ಬಿಡುಗಡೆ ಮಾಡಿದ ಸಚಿವ ದಿನೇಶ್ ಗುಂಡೂರಾವ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸರಣಿ ಸಾವಿನ ಕುರಿತು ಡೆತ್​ ಆಡಿಟ್​​ ವರದಿಯನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಟೆಕ್ನಿಕಲ್ ಕಮಿಟಿ ವರದಿಯ ಶಿಫಾರಸು ಸರ್ಕಾರ ಪಡೆದಿದೆ. ಅಗತ್ಯ ಔಷಧ ಸಲಕರಣೆ, ವೈದ್ಯರು ಜವಾಬ್ದಾರಿ ನಿರ್ವಹಿಸಿದ್ದರೇ, ಶೇ 70 ರಷ್ಟು ಬಾಣಂತಿಯರ ಸಾವುಗಳನ್ನು ನಾವು ತಡೆಯಬಹುದಿತ್ತು. ರಿಂಗರ್ ಲ್ಯಾಕ್ಟೇಟ್ ಸಮಸ್ಯೆಯಿಂದ 18 ಮಂದಿಯ ಬಾಣಂತಿಯರ ಸಾವಾಗಿದೆ. ಡಿಸೆಂಬರ್​ನಿಂದ ಇದನ್ನು ಸರಿಪಡಿಸಲು ತಯಾರಿ ಮಾಡಿದ್ದೇವೆ ಫ್ರೆಷ್ ಫ್ರೋಜನ್ ಪ್ಲಾಸ್ಮಾ ಇದ್ದಿದ್ರೆ ಸಾವಿನ ಸಂಖ್ಯೆ ತಡೆಯಬಹುದಿತ್ತು ಎಂದು ಹೇಳಿದರು.

ಬಳ್ಳಾರಿಯಲ್ಲಿ 5 ಸಾವು ಆಗಿರುವಂತೆ 13 ಕಡೆಗಳಲ್ಲೂ ಹೀಗೆ ಆಗಿದೆ ಎಂಬ ಅನುಮಾನ ಇದೆ. 10 ಮಂದಿ ವೈದ್ಯರಿಗೆ ನಿರ್ಲಕ್ಷ್ಯದ ಕಾರಣಕ್ಕೆ ನೊಟೀಸ್ ನೀಡಿದ್ದೇವೆ ಎಂದು ತಿಳಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!