ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.
ಎಲ್ಲ ಪಕ್ಷಗಳ ನಾಯಕರು ಅಧಿವೇಶನದಲ್ಲಿ ಭಾಗಿಯಾಗುವ ಹಾಗೂ ಬೆಳಗಾವಿಯಲ್ಲಿ ಸಾಲು ಸಾಲು ಪ್ರತಿಭಟನೆಗಳು ಇರುವ ಕಾರಣ ಬಿಗಿ ಭದ್ರತೆಗೆ ಐದು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಈಗಾಗಲೇ ಸಿಎಂ ಸಿದ್ದರಾಮಯ್ಯ ಬೆಳಗಾವಿ ತಲುಪಿದ್ದು, ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಶಾಸಕ ಆಸೀಫ್ ಸೇಠ್ ಸಿಎಂಗೆ ಸ್ವಾಗತ ಕೋರಿದ್ದಾರೆ.
ಎರಡು ಸಾವಿರ ಪೊಲೀಸ್ ಸಿಬ್ಬಂದಿ ವಾಸ್ತವ್ಯಕ್ಕೆ ಸುವರ್ಣ ಸೌಧ ಸಮೀಪದಲ್ಲಿಯೇ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗಿದೆ. ನೀರು, ಬೆಡ್, ಕಾಟ್, ದಿಂಬು, ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ.