ಸೇವೆ ಸಲ್ಲಿಸುತ್ತಿರುವ ಸಿಎಂ ಅರೆಸ್ಟ್‌: ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ರನ್ನು ಬಂಧಿಸಲಾಗಿದೆ.

ಒಂಬತ್ತು ಬಾರಿ ಇಡಿ ಸಮನ್ಸ್‌ ಕೊಟ್ಟಿದ್ದರೂ ಕೇಜ್ರಿವಾಲ್‌ ಗೈರಾಗಿದ್ದರು. ಹೈಕೋರ್ಟ್‌ ಮೊರೆ ಹೋಗಿದ್ದರೂ ಅಲ್ಲಿ ಕೇಜ್ರಿವಾಲ್‌ ಮನವಿ ತಿರಸ್ಕಾರವಾಗಿತ್ತು.

ದೆಹಲಿ ಸಿಎಂ ನಿವಾಸಕ್ಕೆ ಇಡಿ ಅಧಿಕಾರಿಗಳು ತೆರಳಿದ್ದು, ಎರಡು ಗಂಟೆಗಳಿಗೂ ಹೆಚ್ಚು ಸಮಯ ವಿಚಾರಣೆ ನಡೆಸಿದ್ದರು. ಇದಾದ ನಂತರ ಅವರನ್ನು ಬಂಧಿಸಿದ್ದರು.

ಇದರೊಂದಿಗೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರನ್ನು ಅರೆಸ್ಟ್ ಮಾಡಿದಂತಾಗಿದೆ. ಕೇಜ್ರಿವಾಲ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಬಂಧನಕ್ಕೊಳಗಾದ ಮೊದಲ ಸೇವೆ ಸಲ್ಲಿಸುತ್ತಿರುವ ಮುಖ್ಯಮಂತ್ರಿಯಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!