ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರಿ ಪಂಡಿತರ ಹೇಳಿಕೆ ಪ್ರಕರಣದಲ್ಲಿ ನಟಿ ಸಾಯಿ ಪಲ್ಲವಿ ಅವರಿಗೆ ಹಿನ್ನಡೆ ಆಗಿದೆ. ಪೊಲೀಸ್ ವಿಚಾರಣೆ ಎದುರಿಸಲೇಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಮತ್ತು ಇತ್ತೀಚಿನ ವರ್ಷಗಳಲ್ಲಿ ನಡೆದ ಮುಸ್ಲಿಂ ಡ್ರೈವರ್ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದರು. ಇದು ವಿವಾದವಾಗಿ ಮಾರ್ಪಟ್ಟಿತ್ತು. ಸಾಯಿ ಪಲ್ಲವಿ ಅವರ ಹೇಳಿಕೆಗೆ ಸಂಬಂಧಿಸಿ ಬಜರಂಗ ದಳದ ಕಾರ್ಯಕರ್ತ ಅಖಿಲ್ ಎಂಬುವವರು ದೂರು ನೀಡಿದ್ದರು. ಅವರ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲು ಮಾಡಿಕೊಂಡಿದ್ದರು. ಜೂನ್ 21ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಆಗಿತ್ತು. ಈ ನೋಟಿಸ್ ಪ್ರಶ್ನಿಸಿ ಸಾಯಿ ಪಲ್ಲವಿ ಅವರು ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ತೆಲಂಗಾಣ ಹೈಕೋರ್ಟ್ನ ನ್ಯಾಯಮೂರ್ತಿ ಲಲಿತಾ ಅವರು ಸಾಯಿ ಪಲ್ಲವಿ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ. ಜತೆಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.