ನಟಿ ಸಾಯಿ ಪಲ್ಲವಿಗೆ ಹಿನ್ನಡೆ: ಪೊಲೀಸ್ ವಿಚಾರಣೆಗೆ ಹಾಜರಾಗಲು ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಕಾಶ್ಮೀರಿ ಪಂಡಿತರ ಹೇಳಿಕೆ ಪ್ರಕರಣದಲ್ಲಿ ನಟಿ ಸಾಯಿ ಪಲ್ಲವಿ ಅವರಿಗೆ ಹಿನ್ನಡೆ ಆಗಿದೆ. ಪೊಲೀಸ್ ವಿಚಾರಣೆ ಎದುರಿಸಲೇಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
‘ದಿ ಕಾಶ್ಮೀರ್​ ಫೈಲ್ಸ್​’ ಸಿನಿಮಾ ಮತ್ತು ಇತ್ತೀಚಿನ ವರ್ಷಗಳಲ್ಲಿ ನಡೆದ ಮುಸ್ಲಿಂ ಡ್ರೈವರ್​ ಮೇಲಿನ ಹಲ್ಲೆಯ ಘಟನೆಯನ್ನು ಪರಸ್ಪರ ಹೋಲಿಸಿ ಮಾತನಾಡಿದ್ದರು. ಇದು ವಿವಾದವಾಗಿ ಮಾರ್ಪಟ್ಟಿತ್ತು. ಸಾಯಿ ಪಲ್ಲವಿ ಅವರ ಹೇಳಿಕೆಗೆ ಸಂಬಂಧಿಸಿ ಬಜರಂಗ ದಳದ ಕಾರ್ಯಕರ್ತ ಅಖಿಲ್ ಎಂಬುವವರು ದೂರು ನೀಡಿದ್ದರು. ಅವರ ದೂರು ಆಧರಿಸಿ ಪೊಲೀಸರು ಎಫ್​ಐಆರ್ ದಾಖಲು ಮಾಡಿಕೊಂಡಿದ್ದರು. ಜೂನ್ 21ರ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಆಗಿತ್ತು. ಈ ನೋಟಿಸ್ ಪ್ರಶ್ನಿಸಿ ಸಾಯಿ ಪಲ್ಲವಿ ಅವರು ತೆಲಂಗಾಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದೀಗ ತೆಲಂಗಾಣ ಹೈಕೋರ್ಟ್​ನ ನ್ಯಾಯಮೂರ್ತಿ ಲಲಿತಾ ಅವರು ಸಾಯಿ ಪಲ್ಲವಿ ಅವರ ಮನವಿಯನ್ನು ತಿರಸ್ಕರಿಸಿದ್ದಾರೆ. ಜತೆಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!