ಹೊಸದಿಗಂತ ಡಿಜಿಟಲ್ ಡೆಸ್ಕ್
ರಾಜ್ಯದಲ್ಲಿ ಕಾಂಗ್ರೆಸ್ ನಡೆಸಿದ ಪೇ ಸಿಎಂ ಅಭಿಯಾನ ಮಹತ್ವದ ಸಂಚಲನವನ್ನೇ ಸೃಷ್ಠಿಸಿತ್ತು. ಈ ಸಂಬಂಧ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣವನ್ನು ಸರ್ಕಾರ ದಾಖಲಿಸಿತ್ತು. ಆದರೆ ಇದೀಗ ಆ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಪೇ ಸಿಎಂ ಪೋಸ್ಟರ್ ಅಭಿಯಾನ ಸಂಬಂಧ ನೆಲಮಂಗಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ, ವಕೀಲ ಜೆಎಸ್ ನಾರಾಯಣ ಗೌಡ ಹಾಗೂ ಕಾಂಗ್ರೆಸ್ ಕಾನೂನು ಘಟಕದ ಮುಖ್ಯಸ್ಥ ವಕೀಲ ವಿ.ರಾಮಕೃಷ್ಣ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಈ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡಂ ಏಕಸದಸ್ಯಪೀಠವು, ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಗೊಳಿಸಿದೆ.