Wednesday, November 29, 2023

Latest Posts

ರೈತರ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ವಿದ್ಯುತ್‌, ಇಂದಿನಿಂದಲೇ ಜಾರಿ- ಸಿಎಂ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದಿನಿಂದಲೇ ರೈತರ ಪಂಪ್‌ಸೆಟ್‌ಗಳಿಗೆ ಏಳು ಗಂಟೆ ಕರೆಂಟ್‌ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖಾಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಸಿಎಂ, ಇಂದಿನಿಂದಲೇ ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸು ವಿದ್ಯುತ್‌ ನೀಡುವುದಾಗಿ ತಿಳಿಸಿದರು.

ರಾಜ್ಯದೆಲ್ಲೆಡೆ ರೈತರಿಂದ ದಿನಕ್ಕೆ ಹೆಚ್ಚುವರಿ ವಿದ್ಯುತ್‌ ನೀಡಬೇಕೆಂಬ ಮನವಿ ಕೇಳಿಬಂದಿತ್ತು. ಅದರಂತೆ ಇಂದು ಅಧಿಕಾರಿಗಳ ಸಭೆ ನಡೆಸಿ ರೈತರಿಗೆ ಅನುಕೂಲವಾಗುವಂತೆ ಏಳು ತಾಸು ವಿದ್ಯುತ್‌ ನೀಡಲು ತೀರ್ಮಾನಿಸಲಾಗಿದೆ ಎಂದರು. ರಾಯಚೂರು, ಬಳ್ಳಾರಿ ಥರ್ಮಲ್​ ಘಟಕದಿಂದ 1 ಸಾವಿರ ಮೆಗಾ ವ್ಯಾಟ್ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಹಾಗಾಗಿ ಇಂದಿನಿಂದಲೇ ವಿದ್ಯುತ್‌ ಪೂರೈಕೆಯಅಗುವಂತೆ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವುದಾಗಿ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!