Monday, December 11, 2023

Latest Posts

ಭೀಕರ ರಸ್ತೆ ಅಪಘಾತ: ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ 7 ಮಂದಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿರುವ ದುರಂತ ಘಟನೆ ರಾಜಸ್ಥಾನದ ಹನುಮಾನ್​ಗಡ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.

ಘಟನೆಯಲ್ಲಿ ನಾಲ್ವರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಒಂದು ಹೆಣ್ಣು ಮಗು ಸೇರಿ ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ಸಮೀಪದ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಬಳಿಕ ಟ್ರಕ್‌ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಹನುಮಾನ್​ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್​ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಾರಿನಲ್ಲಿ ಒಟ್ಟು 9 ಪ್ರಯಾಣಿಕರಿದ್ದರು, ಈ ಪೈಕಿ ಏಳು ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!