ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ಹಠಾತ್ ಪ್ರವಾಹ, ನೀರಲ್ಲಿ ಕೊಚ್ಚಿಹೋಗಿ ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯದಶಮಿ ಆಚರಣೆ ವೇಳೆ ದುರ್ಗಾ ಮೂರ್ತಿ ವಿಸರ್ಜನೆ ಮಾಡುವಾಗ ಹಠಾತ್ ಪ್ರವಾಹ ಉಂಟಾಗಿ ಏಳು ಮಂದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

ಪಶ್ಚಿಮ ಬಂಗಾಳದ ಜಲ್‌ಪೈಗುರಿಯಲ್ಲಿ ಘಟನೆ ನಡೆದಿದ್ದು, ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ ಉಂಟಾಗಿದೆ. ಘಟನಾ ಸ್ಥಳದಲ್ಲಿ ಎನ್‌ಡಿಆರ್‌ಎಫ್ ತಂಡ ಹಾಜರಿದ್ದ ಕಾರಣ ತಕ್ಷಣ ಕಾರ್ಯಾಚರಣೆ ನಡೆಸಿ, 40 ಮಂದಿಯನ್ನು ರಕ್ಷಿಸಲಾಗಿದೆ.

ಸಂಭ್ರಮದಿಂದ ದೇವಿ ವಿಸರ್ಜನೆಯಲ್ಲಿ ಐವತ್ತಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಆ ವೇಳೆ ಇದ್ದಕ್ಕಿದ್ದಂತೆಯೇ ಪ್ರವಾಹ ಪರಿಸ್ಥಿತಿ ಎದುರಾಗಿದೆ. ನೀರನ್ನು ನೋಡಿ ಜನ ಗಲಿಬಿಲಿಗೊಂಡು ಕೆಳಗೆ ಬಿದ್ದಿದ್ದಾರೆ, ನೋಡುತ್ತಿದ್ದಂತೆಯೇ ಕೆಲವರು ಕೊಚ್ಚಿ ಹೋಗಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!