ಹೊಸದಿಗಂತ ವರದಿ,ಕೊಪ್ಪಳ:
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಸಂಭೋಗ ಮಾಡಿದ ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಕುಮಾರ ಡಿ.ಕೆ. ತೀರ್ಪು ನೀಡಿದ್ದಾರೆ.
ಶಾಲೆಯ ಅಪ್ರಾಪ್ತ ಬಾಲಕನಿಗೆ ಆರೋಪಿ ಖಾದರ ಲೈಂಗಿಕ ಕಿರುಕುಳ ನೀಡಿ ಸಂಭೋಗ ಮಾಡಿದ ಆರೋಪ ಸಾಬೀತಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಸಜೆ ಜತೆಗೆ 35 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಆರೋಪಿ ಖಾದರ್ ಬಾಧಿತ ಬಾಲಕ ಅರ್ಜುನ ಇತನಿಗೆ ಕರೆದು ಆತನ ಎರಡು ಕೈಗಳನ್ನು ಮತ್ತು ಎರಡು ಕಾಲುಗಳನ್ನು ಹಿಡಿದುಕೊಂಡು ಬಾಯಿ ಮುಚ್ಚಿ ಶಾಲೆಯಿಂದ ಹೊತ್ತುಕೊಂಡು ಹೋಗಿದ್ದಾನೆ. ಬಳಿಕ ಬಾಯಿಗೆ ಬಟ್ಟೆ ತುರುಕಿ, ಕಾಲು ಮತ್ತು ಕೈಗಳನ್ನು ಹಗ್ಗದಿಂದ ಕಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ನಂತರ ಬಾಲಕ ಅರ್ಜುನ ಇತನನ್ನು ಕರೆದುಕೊಂಡು ಬಂದು ಶಾಲೆಯ ಹತ್ತಿರ ಬಿಟ್ಟು ಹೋಗಿದ್ದಾನೆ. ಬಾಲಕ 2019 ಏ. 3ರಂದು ತನ್ನ ತಾಯಿಗೆ ವಿಷಯ ತಿಳಿಸಿದ್ದು, ಈ ಸಂಬಂಧ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆ ನಡೆಸಿದ ಪೋಲಿಸ್ ಉಪ-ಅಧೀಕ್ಷಕ ವೆಂಕಟಪ್ಪ ನಾಯಕ ಆರೋಪಿತನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಆರೋಪಿತನ ಮೇಲಿನ ಆರೋಪಣೆಗಳು ಸಾಬೀತಾಗಿದ್ದು, ನ್ಯಾಯಾಲಯ ಆರೋಪಿಸಿಗೆ ಶಿಕ್ಷೆ ವಿಧಿಸಿದೆ.