ಶಾರೂಖ್ ​​ ಖಾನ್- ಅಜಯ್​ ದೇವಗನ್ ಗೆ 5 ರೂ. ಮನಿಆರ್ಡರ್​ ಮಾಡಿದ ವಿದ್ಯಾರ್ಥಿನಿ: ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾನ್​ ಮಸಾಲ ತಂಬಾಕು ಜಾಹಿರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್​​ ನಟರಾದ ಶಾರೂಖ್ ​​ ಖಾನ್​ ಹಾಗೂ ಅಜಯ್​ ದೇವಗನ್​ ಅವರಿಗೆ ವಿದ್ಯಾರ್ಥಿನಿಯೊಬ್ಬಳು ಛೀ ಮಾರಿ ಹಾಕಿದ್ದಾಳೆ.
ಮಧ್ಯಪ್ರದೇಶದ ಖರಗೋನ್ ಜಿಲ್ಲೆಯಬಿಎ ವ್ಯಾಸಂಗ ಮಾಡುತ್ತಿದ್ದವಿದ್ಯಾರ್ಥಿನಿ ಸ್ಟಾರ್​ ನಟರನ್ನು ತರಾಟೆಗೆ ತೆಗೆದುಕೊಂಡಿದ್ದಾಳೆ.
ಶಾರೂಖ್, ದೇವಗನ್ ಆಕ್ಷೇಪದ ನಡುವೆಯೂ ತಂಬಾಕು ಜಾಹಿರಾತಿನಲ್ಲಿ ಕಾಣಿಸಿಕೊಂಡು ಯುವ ಜನತೆ ಮೇಲೆ ಪರಿಣಾಮ ಬೀರುವಂತೆ ಮಾಡಿದ್ದಾರೆ ಎಂದು ಈ ಬಾಲಕಿ ಆರೋಪಿಸಿದ್ದಾಳೆ. ಇದಕ್ಕಾಗಿ ಕೋಪಗೊಂಡು ಈ ಇಬ್ಬರು ನಟರ ಮನೆ ವಿಳಾಸಕ್ಕೆ 5 ರೂ. ಮನಿಆರ್ಡರ್​ ಮಾಡಿದ್ದಾಳೆ.
ಶಾರೂಖ್ ​ ಖಾನ್​ ಮತ್ತು ಅಜಯ್​ ದೇವಗನ್​ ಅವರನ್ನು ನಾನು ಸಹೋದರನಂತೆ ಭಾವಿಸುತ್ತೇನೆ. ಹಾಗಾಗಿ ಇಬ್ಬರು ನನ್ನ ಮನವಿಯನ್ನು ಪುರಸ್ಕರಿಸಲೇಬೇಕು. ದಯವಿಟ್ಟು ಪಾನ್​ ಮಸಾಲಾ ಜಾಹಿರಾತನ್ನು ಹಿಂಪಡೆದು ಯುವಜನತೆಯನ್ನು ರಕ್ಷಿಸಬೇಕೆಂದು ಕೇಳಿಕೊಂಡಿದ್ದಾಳೆ.
ಇತ್ತೀಚೆಗೆ ಪಾನ್​ ಮಸಾಲ ತಂಬಾಕು ಜಾಹಿರಾತಿನಲ್ಲಿ ಕಾಣಿಸಿಕೊಂಡು ಭಾರೀ ಸುದ್ದಿಯಾಗಿದ್ದ ಬೆನ್ನಲ್ಲೇ ಬಾಲಿವುಡ್​ ನಟ ಅಕ್ಷಯ್​ ಕುಮಾರ್ ಈ​ ಜಾಹಿರಾತಿನಿಂದ ಹಿಂದೆ ಸರಿದಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!