ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಬಾಲಿವುಡ್ ನಟ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಇತರ ಮೂವರ ಜಾಮೀನು ಅರ್ಜಿ ವಜಾಗೊಂಡಿದೆ. ಇದರಿಂದ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.
ಈ ಕುರಿತು ಮುಂಬೈನ ವಿಶೇಷ ಎನ್ಡಿಪಿಎಸ್ ನ್ಯಾಯಾಲಯದಿಂದ ಮಹತ್ವದ ಆದೇಶ ಹೊರಬಿದ್ದಿದೆ. ಬೇಲ್ ವಜಾಗೊಂಡಿರುವ ಕಾರಣ ಇದೀಗ ಆರ್ಯನ್ ಪರ ವಕೀಲರು ಹೈಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ದಟ್ಟವಾಗಿದೆ.
ಅಕ್ಟೋಬರ್ 14 ರಂದು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ವಿ.ಪಾಟೀಲ್, ಆರ್ಯನ್ ಖಾನ್ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿ ಅಕ್ಟೋಬರ್ 20ಕ್ಕೆ ವಿಚಾರಣೆಯನ್ನು ಮುಂದೂಡಿದ್ದರು. ಹಾಗಾಗಿ ಇಂದು ಆರ್ಯನ್ ಖಾನ್ಗೆ ಜಾಮೀನು ಸಿಗಬಹುದು ಎಂಬ ಮಾತು ಕೇಳಿ ಬರಲು ಶುರುವಾಗಿತ್ತು. ಆದರೆ, ಜಾಮೀನು ನೀಡಲು ಕೋರ್ಟ್ ನಿರಾಕರಣೆ ಮಾಡಿದೆ.
ಅಕ್ಟೋಬರ್ 3 ರಂದು ಮುಂಬೈನ ಐಷಾರಾಮಿ ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರ್ಯನ್ ಖಾನ್ (23)ನನ್ನು ಬಂಧಿಸಿತ್ತು. ಪ್ರಸ್ತುತ ಆರ್ಯನ್ ಖಾನ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ.