ಶೇಕ್ ಹ್ಯಾಂಡ್ ಮಾಡೋದು ದೊಡ್ಡ ವಿಚಾರವಲ್ಲ: ದರ್ಶನ್ ಸ್ನೇಹದ ಕುರಿತು ಸುದೀಪ್ ರಿಯಾಕ್ಷನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಿಚ್ಚ ಸುದೀಪ್ (Sudeep) ಮತ್ತು ದರ್ಶನ್ (Darshan) ಸ್ನೇಹದ (Friendship) ಸ್ಯಾಂಡಲ್ ವುಡ್ ನಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಇಬ್ಬರು ಮತ್ತೆ ಒಂದಾಗುತ್ತಾರೆ, ಮತ್ತೆ ಮೊದಲಿನಂತೆ ಸ್ನೇಹಿತರಾಗಿ ಅಭಿಮಾನಿಗಳಿಗೆ ಕಾಣಿಸಿಕೊಳ್ಳುತ್ತಾರೆ ಎನ್ನುವ ಕಾಯುವಿಕೆ ಅಭಿಮಾನಿಗಳಲ್ಲೂ ಇದ್ದಾರೆ. ಇದಕ್ಕೆ ತಕ್ಕಂತೆ ಮೊನ್ನೆ ಸನ್ನಿವೇಶ ಸೃಷ್ಟಿಯಾಗಿತ್ತು. ಆದರೂ, ಇಬ್ಬರೂ ಮಾತಾಡಲಿಲ್ಲ ಎನ್ನುವ ಬೇಸರ ಅಭಿಮಾನಿಗಳಲ್ಲಿ ಇತ್ತು.

ಈ ಕುರಿತು ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಸುಮಲತಾ ಅವರ ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದ್ದೆ. ಮುಂಚೆನೇ ದರ್ಶನ್ ಇರ್ತಾರೆ ಅಂತ ನಂಗೂ ಗೊತ್ತಿತ್ತು. ಕಿತ್ತಾಡಿಕೊಂಡ್ರು, ಜಗಳ ಮಾಡಿಕೊಂಡ್ರು ಅನ್ನೋದು ಕಲ್ಪನೆ. ಗೋಡೆ ಮುರಿಬೇಕು, ಆದರೆ ಕಲ್ಪನೆ ಇರಬಾರದು. ನನ್ ಕಣ್ಣಲ್ಲಿ ಕಣ್ಣಿಟ್ಟು ಹೇಳಿದ್ರೆ ಒಪ್ತೀನಿ. ಪ್ರಶ್ನೆಗಳು ಬರ್ತಾವೆ, ಒಳ್ಳೇದು, ಕೆಟ್ಟದು ಇರ್ತಾವೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡ ವಿಚಾರವಲ್ಲ. ಇಬ್ರು matured ಇದೀವಿ. ಎಲ್ಲವೂ ಸರಿ ಹೋಗ್ಬೇಕು, ಅಂದಾಗ ಸರಿ ಹೋಗುತ್ತೆ’ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!