ಶಕ್ತಿ ಯೋಜನೆ ಸ್ಥಗಿತವಾಗುತ್ತಾ?: ಸಾರಿಗೆ ನಿಗಮ ನೀಡಿದೆ ಸ್ಪಷ್ಟನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಶಕ್ತಿ ಯೋಜನೆ ಸ್ಥಗಿತ ಎಂಬುದು ಸತ್ಯಕ್ಕೆ ದೂರವಾದ ಸುದ್ದಿಯಾಗಿದ್ದು, ಶಕ್ತಿ ಯೋಜನೆ ಸ್ಥಗಿತವಾಗಿಲ್ಲ. ಮುಂದುವರೆಯುತ್ತದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಸದ್ಯದಲ್ಲೇ ಸರ್ಕಾರದ ಶಕ್ತಿ ಯೋಜನೆ ಸ್ಥಗಿತವಾಗಲಿದೆ. ಈ ಬಗ್ಗೆ ಕೋರ್ಟ್ ಆದೇಶ ಹೊರಡಿಸಿದೆ ಎಂಬ ವಿಷಯಗಳು ಹರಿದಾಡುತ್ತಿದೆ.

ಇದಿಗೆ ಈ ಕುರಿತು ಸ್ಪಷ್ಟನೆ ನೀಡಿದ ಕೆಎಸ್ ಆರ್ ಟಿಸಿ ಶಕ್ತಿ ಯೋಜನೆ ಸ್ಥಗಿತವಿಲ್ಲ.ಮುಂದುವರೆಯುತ್ತದೆ, ಯಾರೂ ಸುಳ್ಳು ಸುದ್ದಿ ನಂಬಬೇಡಿ ಎಂದು ಸ್ಪಷ್ಟನೆ ನೀಡಿದೆ.

ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕೂಡ ಸ್ಪಷ್ಟನೆ ನೀಡಿದ್ದು, ಶಕ್ತಿ ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳು ಕೇಳಿ ಬರುತ್ತಿವೆ. ಇದನ್ನು ಒಂದು ಪಕ್ಷದವರು ಮಾಡಿಸುತ್ತಿದ್ದಾರೆ ಎಂದರು. ಐದಲ್ಲ 10 ವರ್ಷ ಯೋಜನೆ ಮುಂದುವರೆಯುತ್ತದೆ. ಮಹಿಳೆಯರು ಯಾರೂ ಕೂಡ ಪಾಸ್ ಪಡೆಯುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!