ಹೊಸದಿಗಂತ ವರದಿ ಹುಬ್ಬಳ್ಳಿ:
ರಾಜ್ಯ ಸರ್ಕಾರ ಐತಿಹಾಸಿ ಶಕ್ತಿ ಯೋಜನೆ ಜಾರಿಗೆಗೊಳಿಸುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹುಬ್ಬಳ್ಳಿಯ ಪ್ರತಿಯೊಂದು ಬಸ್ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ನಗರದ ಪ್ರಾದೇಶಿಕ ಬಸ್ ಟರ್ಮಿನಲ್, ಗೋಕುಲ್ ರಸ್ತೆ ಹೊಸ ಬಸ್ ನಿಲ್ದಾಣ, ಹಳೆ ಬಸ್ ನಿಲ್ದಾಣ, ಸಿಬಿಟಿ ಬಸ್ ನಿಲ್ದಾಣ ಸೇರಿದಂತೆ ಎಲ್ಲ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ಇನ್ನೂ ಹುಬ್ಬಳ್ಳಿ-ಧಾರವಾಡ ನಡುವೆ ಇರುವ ಬಿಆರ್ಟಿಎಸ್ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ ಜಗಳ ಹಾಗೂ ಅಹಿತಕರ ಘಟನೆ ನಡೆಯಬಾರದು ಎಂದು ಅಲ್ಲಿಯೂ ಸಹ ಪೊಲೀಸರನ್ನು ಕೆಲಸಕ್ಕೆ ನಿಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಅಷ್ಟೇ ಅಲ್ಲದೆ ಬೆಂಗಳೂರು, ಮಂಗಳೂರು ಸೇರಿ ಬೇರೆ ಜಿಲ್ಲೆಗಳಿಂದ ಸಿಬ್ಬಂದಿ ಕರೆಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಬಿಆರ್ಟಿಎಸ್ ಬಸ್ ನಲ್ಲಿ ಸಹ ಮಹಿಳೆಯರಿಗೆ ಉಚಿತ ಸೇವೆಗೆ ಅವಕಾಶ ನೀಡಬೇಕು ಎಂದು ಮಹಿಳೆಯರು ಆಗ್ರಹಿಸಿದರು.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಗ್ರಾಮಾಂತರ ವಿಭಾಗದಲ್ಲಿ ಶಕ್ತಿ ಯೋಜನೆ ಜಾರಿಗೆ ಕೆಲವೇ ಕ್ಷಣದಲ್ಲಿ ಚಾಲನೆ ದೊರೆಯಲಿದೆ.