ಶಾಮನೂರು ಹೇಳಿಕೆ ಚುನಾವಣೆಯಲ್ಲಿ ಪರಿಣಾಮ ಬೀರದು: ಮಧು ಬಂಗಾರಪ್ಪ

ಹೊಸದಿಗಂತ ವರದಿ ಶಿವಮೊಗ್ಗ

ಹಿರಿಯರಾದ ಶಾಸಕ ಶಾಮನೂರು ಶಿವಶಂಕರಪ್ಪ ಸಂಸದ ಬಿ ವೈ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಹೇಳಿರುವುದು ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಎಂ.ಬಿ. ಪಾಟೀಲ್ ಒಳ್ಳೆಯ ಕೆಲಸ ಮಾಡುತ್ತಾರೆಂದು ಯಡಿಯೂರಪ್ಪನವರು ಹೇಳಿದ್ದರು. ಎಂ.ಪಿ. ಪ್ರಕಾಶ್ ಅವರು ಕೂಡ ಜೆಡಿಎಸ್ ನಲ್ಲಿದ್ದ ನನ್ನನ್ನು ಗೆಲ್ಲಿಸಿ ಎಂದಿದ್ದರು. ಒಳ್ಳೆ ಕೆಲಸ ಮಾಡಿರುವ ಬಗ್ಗೆ ಹಿರಿಯರಾಗಿ ಹೇಳಿದ್ದಾರೆ ಎಂದರು.
ಶಾಮನೂರು ಹೇಳಿಕೆಯಿಂದ ಈಗ ಸೃಷ್ಟಿಯಾಗಿರುವ ಗೊಂದಲದ ಬಗ್ಗೆ ಅವರೇ ಉತ್ತರ ಕೊಟ್ಟರೆ ಒಳ್ಳೆಯದು. ನಾನು ಹೇಳುವುದಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!