ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ದೇಶಕ್ಕೆ ಹಿಡಿದಿರುವ ಶನಿ ಎಂದರೆ ಅದು ಮೋದಿ. ಲೋಕಸಭಾ ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ. ಜೂನ್ 4ರ ಫಲಿತಾಂಶದಂದು ಶನಿ ಬಿಟ್ಟು ಹೋಗಲಿ ಎಂದು ಕಾಯುತ್ತಿದ್ದೇವೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಲು ಹೋಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಚುನಾವಣಾ ಪ್ರಚಾರ ನಡೆಸಿದ ರಮೇಶ್ ಕುಮಾರ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಎಲ್ಲಾ ವರ್ಗದವರಿಗೂ ಆತ್ಮಸ್ಥೈರ್ಯ ತಂದುಕೊಟ್ಟರು. ಅಂಥವರ ಸ್ಥಾನಕ್ಕೆ ಎಂಥವನು ಬಂದು ಕೂತಿದ್ದಾನೆ. ಈ ದೇಶಕ್ಕೆ ಹಿಡಿದ ಶನಿ ಅಂದರೆ ಅದು ಮೋದಿ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಮಾಜಿ ಸ್ಪೀಕರ್ ಹೇಳಿಕೆಗೆ ಬಿಜೆಪಿ ನಾಯಕರು ಕೆಂಡ ಕಾರಿದ್ದು, ಕಾಂಗ್ರೆಸ್ ಈ ದೇಶಕ್ಕೆ ಹಿಡಿದಿರುವ ಶನಿ. ಅದಕ್ಕೇ ಜನ ಈ ಹಿಂದೆ ಸೋಲಿಸಿದ್ದು. ರಮೇಶ್ ಕುಮಾರ್ ತಮ್ಮ ಘನತೆಗೆ ತಕ್ಕ ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.