ನಾರಾಯಣಸಾ ಭಾಂಡಗೆಗೆ ಶಾಂತಗೌಡ ಪಾಟೀಲ ಸನ್ಮಾನ

ಹೊಸದಿಗಂತ ವರದಿ ಬಾಗಲಕೋಟೆ:

ರಾಜ್ಯ ಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ ಅಭ್ಯರ್ಥಿ ಯನ್ನಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ ಅವರಿಗೆ ಅವಕಾಶ ನೀಡಿದ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಅವರು ಭಾಂಡಗೆ ಅವರನ್ನು ಸನ್ಮಾನಿಸಿ ಗೌರವಿಸಿದರು.

ಸೋಮವಾರ ನಗರದ ಭಾಂಡಗೆ ಅವರ ನಿವಾಸಕ್ಕೆ ತೆರಳಿ‌ ಸನ್ಮಾನಿಸಿ ಶುಭ ಕೋರಿ ಪಾಟೀಲ ರು ಮಾತನಾಡಿದರು. ಕರ್ನಾಟಕದಿಂದ ನಾರಾಯಣಸಾ ಭಾಂಡಗೆ ಅವರಿಗೆ ನಮ್ಮ ಪಕ್ಷದ ಹೈ ಕಮಾಂಡ್ ಅವಕಾಶ ನೀಡಿದ್ದು ಸಂತೋಷ ತಂದಿದೆ ಎಂದರು.

ಭಾಂಡಗೆ ಅವರು ಪಕ್ಷದ ಶಿಸ್ತಿನ ಮುಖಂಡರು ಆಗಿದ್ದು , ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಹಾಗೂ ವಿಧಾನ ಪರಿಷತ್ ಸದಸ್ಯ ರಾದ ಸಂದರ್ಭದಲ್ಲಿ ಅವರು ಕ್ರೀಯಾಶೀಲವಾಗಿ ಕೆಲಸ ಮಾಡುವ ಜತೆಗೆ ಪಕ್ಷದ ಸಂಘಟನೆಗೆ ಒತ್ತು ನೀಡುವ ಕೆಲಸವನ್ನು ಮಾಡಿದ್ದಾರೆ. ಅವರಿಗೆ ಕರ್ನಾಟಕ ದಿಂದ ರಾಜ್ಯ ಸಭೆ ಚುನಾವಣೆಗೆ ಪಕ್ಷದಿಂದ ಟಿಕೆಟ್ ನೀಡಿರುವುದು ಸಂತಸದ ವಿಷಯ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!