ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಅವರು ಪಕ್ಷದ ಎಲ್ಲಾ ವಿಭಾಗಗಳು ಮತ್ತು ಕೋಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ ಎಂದು ಎನ್ಸಿಪಿಯ ಹಿರಿಯ ನಾಯಕರೊಬ್ಬರು ಬುಧವಾರ ಹೇಳಿರುವುದಾಗಿಮೂಲಗಳು ವರದಿ ಮಾಡಿವೆ.
ಈ ಕುರಿತು ಟ್ವೀಟ್ ಮಾಡಿರುವ ಎನ್ಸಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಫುಲ್ ಪಟೇಲ್ “ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಅವರ ಅನುಮೋದನೆಯೊಂದಿಗೆ, ಎಲ್ಲಾ ಇಲಾಖೆಗಳು ಮತ್ತು ಕೋಶಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ” ಎಂದು ಹೇಳಿದ್ದಾರೆ.
ಎಂವಿಎ(ಮಹಾ ವಿಕಾಸ್ ಅಘಾಡಿ)ಯ ಪತನದ ಮೂರುವಾರಗಳ ನಂತರ ಈ ಬೆಳವಣಿಗೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಹಠಾತ್ ನಡೆಗೆ ಕಾರಣವಿನ್ನೂ ಬಹಿರಂಗಗೊಂಡಿಲ್ಲ. ಪ್ರಫುಲ್ ಪಟೇಲ್ ಅವರೂ ಕೂಡ ಕಾರಣವನ್ನು ಹೊರಹಾಕಿಲ್ಲ ಎನ್ನಲಾಗಿದೆ.