ಶರದ್ ಪವಾರ್ ಕೊಲೆ ಬೆದರಿಕೆ: ಪೋಲೀಸರ ಮುಂದೆ ಕಾರಣ ಬಿಚ್ಚಿಟ್ಟ ಆರೋಪಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಎನ್ ಸಿ ಪಿ ಅಧ್ಯಕ್ಷ ಶರದ್ ಪವಾರ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ವ್ಯಕ್ತಿಯನ್ನು ಮುಂಬೈ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಈ ವೇಳೆ ಆತ ತನ್ನ ಪತ್ನಿ ಎನ್ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋದ ನಂತರ ಮತ್ತು ಪಕ್ಷದ ಮುಖ್ಯಸ್ಥರು ಈ ವಿಷಯದಲ್ಲಿ ಮಧ್ಯಪ್ರವೇಶಿಸದ ಕಾರಣ ಆಕ್ರೋಶಗೊಂಡು ಬೆದರಿಕೆ ಹಾಕಿದ್ದೇನೆ ಎಂದು ಹೇಳಿದ್ದಾನೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸರು, ಆರೋಪಿ ಬಿಹಾರಕ್ಕೆ ಸ್ಥಳಾಂತರಗೊಳ್ಳುವ ಮೊದಲು 10 ವರ್ಷಗಳ ಕಾಲ ತನ್ನ ಪತ್ನಿಯೊಂದಿಗೆ ಪುಣೆಯಲ್ಲಿ ವಾಸಿಸುತ್ತಿದ್ದನು. ಈ ವೇಳೆ ತನ್ನ ಪತ್ನಿ ಎನ್ ಸಿಪಿ ಕಾರ್ಯಕರ್ತನೊಂದಿಗೆ ಓಡಿಹೋಗಿ ಮದುವೆಯಾದಳು ಎಂದು ಆರೋಪಿ ಹೇಳಿಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಕರಣದಲ್ಲಿ ಆತನ ವಿಚಾರಣೆಯ ನಂತರ, ಆರೋಪಿಯನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೋರ್ಟ್ ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!