ಚಿಪ್ಪು ಮೀನು (ನರ್ತೆ) ಹೆಕ್ಕಲು ಹೋಗಿ ಕಾಲು ಜಾರಿ ಬಿದ್ದು ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಗದ್ದೆಯಲ್ಲಿ ಚಿಪ್ಪು ಮೀನು(ನರ್ತೆ) ಹೆಕ್ಕಲು ತೆರಳಿದ್ದ ವ್ಯಕ್ತಿಯೊರ್ವ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಪೊಳಲಿ ಸಮೀಪದ ಪುಂಚಮೆ ಎಂಬಲ್ಲಿ ಬುಧವಾರ ನಡೆದಿದೆ.
ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಸಾಣೂರು ಪದವು ನಿವಾಸಿ ದಾಮೋದರ(32) ಮೃತಪಟ್ಟ ದುರ್ದೈವಿ. ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುವ ಇವರು ಗದ್ದೆಯಲ್ಲಿ ದೊರಯುವ ಚಿಪ್ಪು ಮೀನು (ನರ್ತೆ) ಹೆಕ್ಕಲು ಹೋಗಿದ್ದ ವೇಳೆ ಘಟನೆ ನಡೆದಿದೆ.
ಗದ್ದೆಗೆ ಇಳಿಯುವ ವೇಳೆ ದಾಮೋದರ್ ಆಯತಪ್ಪಿ ಮುಗ್ಗರಿಸಿ ಗದ್ದೆಗೆ ಬಿದ್ದಿದ್ದು, ತಲೆ ಗದ್ದೆಯಲ್ಲಿ ಹೂತು ಹೋಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!