ಶೆಟ್ಟರ್ ಸೇರ್ಪಡೆ ನಮಗೆ ಪ್ಲಸ್ ಪಾಯಿಂಟ್, ಗೆಲುವು ಖಚಿತ: ಖರ್ಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವುದು ನಮಗೆ ಹೆಚ್ಚಿನ ಬಲ ಸಿಕ್ಕಂತಾಗಿದೆ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಮ್ಮ ಪಕ್ಷದ ಸಿದ್ಧಾಂತಗಳನ್ನು ಒಪ್ಪಿಯೇ ಶೆಟ್ಟರ್ ಪಕ್ಷಕ್ಕೆ ಬಂದಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಗೆಲುವು ನಮ್ಮದೆ, 150 ಸ್ಥಾನ ಬರುವುದು ಖಾತ್ರಿಯಾಗಿದೆ ಎಂದಿದ್ದಾರೆ.

ಸತತ ಆರು ಬಾರಿ ಶಾಸಕರಾಗಿದ್ದರೂ, ಬಿಜೆಪಿ ಹಿರಿಯ ನಾಕರಾಗಿದ್ದರೂ ಈ ಬಾರಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡಿಲ್ಲ. ಮಾತುಕತೆಯಿಲ್ಲದೆ ಏಕಾಏಕಿ ಟಿಕೆಟ್ ನೀಡದ್ದಕ್ಕಾಗಿ ಶೆಟ್ಟರ್ ಅಸಮಾಧಾನಗೊಂಡು ಬಿಜೆಪಿಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್‌ಗೆ ಸೇರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!