ಶಿಲ್ಪಾ ಆತ್ಮಹತ್ಯೆ ಪ್ರಕರಣ: ಬಂಧಿತ ಅಜೀಜ್ ಗೆ 7 ದಿನಗಳ ಪೊಲೀಸ್ ಕಸ್ಟಡಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದ್ದ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಇಬ್ಬರನ್ನು ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ಪ್ರಕರಣ ಪ್ರಮುಖ ಆರೋಪಿ ಅಜೀಜ್ ಮತ್ತು ಅವನಿಗೆ ಸಹಾಯ ಮಾಡಿದ ರಹೀಮ್ ನನ್ನು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು, ಅಜೀಜ್ ನನ್ನು ಏಳು ದಿನಗಳ ಅವಧಿಗೆ ಪೋಲಿಸ್ ಕಸ್ಟಡಿಗೆ ನೀಡಲಾಗಿದೆ. ರಹೀಮ್ ನನ್ನು ೧೪ ದಿನಗಳ ಅವಧಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣಕ್ಕೆ ಸಂಭಂದಿಸಿ ಇನ್ನೋರ್ವ ಆರೋಪಿ ರಶೀದ್ ನನ್ನು ವಶಕ್ಕೆ ಪಡೆಯಲಾಗಿದ್ದು, ಸೋಮವಾರ ರಾತ್ರಿ ನ್ಯಾಯಧೀಶರ ಮನೆಗೆ ಅಥವಾ ಮಂಗಳವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಗಳಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!