ಹೊಸದಿಗಂತ ವರದಿ, ಉಡುಪಿ:
ಭಾರೀ ಸಂಚಲನ ಮೂಡಿಸಿದ್ದ ಕುಂದಾಪುರ ಶಿಲ್ಪಾ ದೇವಾಡಿಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಅರೋಪಿಸಲಾಗಿರುವ ಇಬ್ಬರು ಆರೋಪಿಗಳ ಪೈಕಿ ಅಜೀಜ್ ಎಂಬಾತನನ್ನು ಕುಂದಾಪುರ ಪೋಲಿಸರ ತಂಡ ಬಂಧಿಸಿದೆ.
ಈ ಘಟನೆಯನ್ನು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಖಚಿತಪಡಿಸಿದ್ದಾರೆ.
ಅಜೀಜ್ ನ ಪ್ರೇಮ ಪಾಶಕ್ಕೆ ಸಿಲುಕಿ ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಅಜೀಜ್ ಮತ್ತು ಸಲ್ಮಾ ಕಾರಣ ಎಂದು ಆರೋಪಿಸಿ ಕುಂದಾಪುರ ಠಾಣೆಯಲ್ಲಿ ಮೇ 25 ರಂದು ಪ್ರಕರಣ ದಾಖಲಾಗಿತ್ತು.
ನಂತರದ ಶಿಲ್ಪಾಳ ಸಹೋದರ ಮಾಧ್ಯಮದೊಂದಿಗೆ ಮಾತನಾಡಿ, ನನ್ನ ತಂಗಿಗೆ ಲೈಂಗಿಕವಾಗಿ ಕಿರುಕುಳ ನೀಡಿ ಇಸ್ಲಾಂ ಮತಕ್ಕೆ ಮತಾಂತರವಾಗುವಂತೆ ಬಲವಂತ ಮಾಡಲಾಗಿತ್ತು ಎಂದು ಹೇಳಿಕೆಯನ್ನೂ ನೀಡಿದ್ದರು.
ಇದಲ್ಲದೆ ಶಿಲ್ಪಾ ಆತ್ಮಹತ್ಯೆಗೆ ಕಾರಣರಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚದೇ ಇದ್ದಲ್ಲಿ ಬೃಹತ್ ಪ್ರತಿಭಟನೆಗೆ ಬಜರಂಗದಳ ಕರೆ ನೀಡಿತ್ತು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ