ಹೊಸದಿಗಂತ ವರದಿ, ಶಿವಮೊಗ್ಗ:
ಡಿಸಿಸಿ ಬ್ಯಾಂಕ್ ನ ಮೊಬೈಲ್ ಆ್ಯಪ್ ಸೇವೆಗೆ ಚಾಲನೆ ನೀಡಲಾಗಿದೆ.
ಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿದ್ದ ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಛೇರಿಯ ಮುಖ್ಯ ಮಹಾ ಪ್ರಬಂಧಕ ಟಿ. ರಮೇಶ್ ಮೊಬೈಲ್ ಆ್ಯಪ್ ಸೇವೆಯನ್ನು ಗ್ರಾಹಕರಿಗೆ ಅರ್ಪಿಸಿದರು.
ಇದೇ ವೇಳೆ ಬ್ಯಾಂಕಿನ ವ್ಯವಹಾರಗಳು, ಲಾಭ ಗಳಿಕೆ, ಕೃಷಿ ಸಾಲ ಹಂಚಿಕೆ, ಆರ್ಥಿಕ ಸ್ಥಿತಿಗತಿಗಳ ಅವಲೋಕನ ನಡೆಸಿದರು. ಬ್ಯಾಂಕು ಆರ್ಥಿಕ ಸಧೃಡತೆಯನ್ನು ಹೊಂದಿದ್ದು, ಪ್ರಗತಿಯತ್ತ ಸಾಗುತ್ತಿರುವ ಬಗ್ಗೆ ಪ್ರಶಂಸಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಮಾತನಾಡಿ, ಬ್ಯಾಂಕಿನ ಗ್ರಾಹಕರು ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆ ಮೂಲಕ ಗೂಗಲ್ ಪ್ಲೇ ಸ್ಟೋರ್ನಿಂದ ಬ್ಯಾಂಕಿನ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದರು.
ಮೊದಲ ಹಂತದಲ್ಲಿ ನಾನ್ ಂಡ್ ಸೇವೆಗಳನ್ನು ಮಾತ್ರ ಒದಗಿಸುತ್ತಿದೆ. ಗ್ರಾಹಕರ ಖಾತೆಗಳ ಬಾಕಿ ಉಳಿಕೆ, ಮಿನಿ ಪಾಸ್ ಬುಕ್, ಬ್ಯಾಂಕಿನ ಸಾಮಾನ್ಯ ಮಾಹಿತಿಗಳು, ಪಾಸಿಟೀವ್ ಪೇ ಸಿಸ್ಟಂ ಅಡಿಯಲ್ಲಿ ಗ್ರಾಹಕರು ನೀಡಿದ ಚೆಕ್ ವಿವರಗಳನ್ನು ಬ್ಯಾಂಕಿಗೆ ಒದಗಿಸಬಹುದಾಗಿದೆ ಎಂದರು .
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ಮುಖ್ಯ ಕಾರ್ಯನಿರ್ವಾಹಕ ನಾಗೇಶ್ ಎಸ್.ಡೋಂಗರೆ, ಸಹಕಾರ ಸಂಘಗಳ ಉಪ ನಿಬಂಧಕ ಜಿ.ವಾಸುದೇವ, ನಬಾರ್ಡ್ ಜಿಲ್ಲಾ ಅಕಾರಿ ರವಿ ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.