ಹೊಸದಿಗಂತ ವರದಿ ಶಿವಮೊಗ್ಗ:
ನಗರದ ರಾಗಿಗುಡ್ಡದಲ್ಲಿ ಈದ್ ಮೆರವಣಿಗೆ ವೇಳೆ ನಡೆದಿರುವ ಕಲ್ಲು ತೂರಾಟ ಪ್ರಕರಣದಲ್ಲಿ ಗಾಯಗೊಂಡವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟಿಲ್ ನೇತೃತ್ವದ ತಂಡ ಗುರುವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಘಟನೆಯಲ್ಲಿ ಗಾಯಗೊಂಡಿದ್ದ ರೋಹನ್ ರಾವ್, ಪ್ರದೀಪ್ ಸೇರಿದಂತೆ ನಾಲ್ವರು ಗಾಯಾಳುಗಳ ಜೊತೆ ಮಾತುಕತೆ ನಡೆಸಿದರು. ಘಟನೆ ಹೇಗೆ ನಡೆಯಿತು, ಗಾಯಗೊಂಡಿದ್ದ ಹೇಗೆ ಎಂಬ ಮಾಹಿತಿ ಪಡೆದುಕೊಂಡರು. ಈ ವೇಳೆ ರೋಹನ್ರಾವ್ ಸೇರಿದಂತೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ತಂಡದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಆರಗ ಜ್ನಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಮೊದಲಾದವರು ಇದ್ದರು.
ಮೆಗ್ಗಾನ್ ಆಸ್ಪತ್ರೆ ಈಕ್ಷಕ ಡಾ.ತಿಮ್ಮಪ್ಪ, ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ಪಾಟೀಲ್, ಡಾ.ವಿರೂಪಾಕ್ಷಪ್ಪ ಮಾಹಿತಿ ನೀಡಿದರು.