ದಿಗಂತ ವರದಿ ಶಿವಮೊಗ್ಗ :
ಟಿಪ್ಪರ್ ಮತ್ತು ಕಾರು ಡಿಕ್ಕಿ ಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ-ಭದ್ರಾವತಿ ನಡುವಿನ ಜೇಡಿಕಟ್ಟೆ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.
ಕಾರಿನಲ್ಲಿದ್ದ ಭದ್ರಾವತಿ ಪೇಪರ್ ಟೌನ್ ನಿವಾಸಿಗಳಾದ ಷಣ್ಮುಗ(39) ಹಾಗೂ ರಾಮಚಂದ್ರ(40) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇವರು ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು.
ಟಿಪ್ಪರ್ ಭದ್ರವಾತಿ ಕಡೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಬಳಿಕ ಇನ್ನೊಂದು ಬದಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಇಲ್ಲಿ ಚತುಷ್ಪಥ ರಸ್ತೆ ಇದ್ದರೂ ಅವಘಡ ಸಂಭವಿಸಿದೆ.