ಶಿಂಧೆ ಬಣ ನಿಜವಾದ ಶಿವಸೇನೆ ಸ್ಪೀಕರ್: ಸುಪ್ರೀಂ ಕೋರ್ಟ್ ಹೋಗಲು ಉದ್ಧವ್ ಠಾಕ್ರೆ ನಿರ್ಧಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಬಣವು ನಿಜವಾದ ಶಿವಸೇನೆ ಎಂದು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್ ಆದೇಶ ನೀಡಿದ್ದು, ಇದರ ಬೆನ್ನಲ್ಲೇ ಉದ್ಧವ್ ಠಾಕ್ರೆ ಬಣ ಅಸಮಾಧಾನಗೊಂಡಿದೆ.

ಈ ಕುರಿತು ಪ್ರತಿಕ್ರಿಯಿಸಿದ ಉದ್ಧವ್ ಠಾಕ್ರೆ, “ಇದು ಬಿಜೆಪಿಯ ಪಿತೂರಿ ಮತ್ತು ಒಂದು ದಿನ ನಾವು ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆಯನ್ನ ಮುಗಿಸುತ್ತೇವೆ ಎಂಬುದು ಅವರ ಕನಸಾಗಿತ್ತು. ಆದರೆ ಶಿವಸೇನೆ ಈ ಒಂದು ನಿರ್ಧಾರದೊಂದಿಗೆ ಕೊನೆಗೊಳ್ಳುವುದಿಲ್ಲ. ನಾವು ಸುಪ್ರೀಂ ಕೋರ್ಟ್’ಗೆ ಹೋಗುತ್ತೇವೆ” ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!