ಶಿಂಧೆ ಬಣಕ್ಕೆ ಶಿವಸೇನೆ: ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಕರೆದ ಸಂಜಯ್ ರಾವತ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಕೇಂದ್ರ ಚುನಾವಣಾ ಆಯೋಗ ನೀಡಿದ್ದು, ಈ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಪಕ್ಷದ ನಾಯಕ ಸಂಜಯ್ ರಾವತ್ ಅವರು, ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷ ಜನರ ಬಳಿಗೆ ಹೋಗಲಿದೆ. ಚುನಾವಣಾ ಆಯೋಗದ ಈ ನಿರ್ಧಾರ ನಿರೀಕ್ಷಿತ ಮತ್ತು ಆಯೋಗದ ಮೇಲೆ ನಂಬಿಕೆ ಇರಲಿಲ್ಲ ಎಂದು ರಾವತ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!