ಮಧುಕೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಶಿವರಾಜ್ ಕುಮಾರ್ ದಂಪತಿ

ಹೊಸದಿಗಂತ ವರದಿ, ಬನವಾಸಿ:
ಕನ್ನಡ ಚಲನಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರೊಂದಿಗೆ ಶುಕ್ರವಾರ ಇಲ್ಲಿನ ಶ್ರೀ ಮಧುಕೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಆಡಳಿತ ಮಂಡಳಿಯಿಂದ ಶಿವರಾಜ್ ಕುಮಾರ್ ದಂಪತಿಯನ್ನು ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಧಾನ ಅರ್ಚಕರು ನಾಗೇಶ ಪತ್ರೆ, ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಜಶೇಖರ ಒಡೆಯರ್, ಕಾರ್ಯದರ್ಶಿ ಪ್ರಕಾಶ ಬಂಗ್ಲೆ, ಟಿ.ಜಿ. ನಾಡಿಗೇರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ್, ಮುಖಂಡರಾದ ಸುನೀಲ್ ನಾಯ್ಕ್, ರವಿ ನಾಯ್ಕ್ ಕಲಕರಡಿ, ಮಧುಕೇಶ್ವರ ನಾಯ್ಕ್, ಸಂತೋಷ ಕಲಕರಡಿ, ವೆಂಕಟೇಶ ಚೌದರಿ ಮತ್ತಿತರರು ಇದ್ದರು.
ಪಿಎಸ್ಐ ಹನುಮಂತ ಬಿರಾದಾರ ಅವರ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!