ಶಿವನಸಮುದ್ರಕ್ಕೆ ಶಿವರಾಜ್‌ಕುಮಾರ್‌ ದಂಪತಿ ಭೇಟಿ, ಕಾವೇರಿಗೆ ಬಾಗಿನ ಅರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆ ಡಿಸೆಂಬರ್ 18 ರಂದು ವಿದೇಶಕ್ಕೆ ತೆರಳುತ್ತಿರುವ ನಟ ಡಾ.ಶಿವರಾಜ್ ಕುಮಾರ್  ತಮ್ಮ ಪತ್ನಿ ಗೀತಾ ಅವರೊಂದಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರಕ್ಕೆ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕಾವೇರಿ ನದಿಗೆ ಬಾಗಿನ ಅರ್ಪಿಸಿದ ಅವರು ಗಣಪತಿ ದೇವಸ್ಥಾನ, ಮಧ್ಯರಂಗ ಹಾಗೂ ಮೀನಾಕ್ಷಿ ಸಮೇತ ಸೋಮೇಶ್ವರ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಚಕ್ರ ದರ್ಶನ ಮಾಡಿ ಆದಿಶಕ್ತಿ ಮಾರಮ್ಮ ದೇವಾಲಯಕ್ಕೆ ಸೀರೆ ಕಾಣಿಕೆ ಅರ್ಪಿಸಿದರು. ಈ ಮೊದಲು ನಟ ಶಿವರಾಜ್‌ಕುಮಾರ್ ಹಾಗೂ ಅವರ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದರು.
- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!