ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ಶಾಕ್: ಮಂತ್ರಿ ಮಂಡಲದಿಂದ ವಜಾಗೊಳಿಸಿದ ರಾಜ್ಯಪಾಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ರಾಜ್ಯಪಾಲರು ಮಂತ್ರಿ ಮಂಡಲದಿಂದ ವಜಾಗೊಳಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ವಿ ಸೆಂಥಿಲ್ ಬಾಲಾಜಿಯನ್ನು ಈ ತಕ್ಷಣದಿಂದಲೇ ಮಂತ್ರಿ ಮಂಡಲದಿಂದ ವಜಾಗೊಳಿಸಲಾಗಿದೆ ಎಂದು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಆದೇಶ ಹೊರಡಿಸಿದ್ದಾರೆ.

ತಮಿಳುನಾಡು ಸಚಿವ ಬಾಲಾಜಿ ಖಾತೆಗಳನ್ನು ಮರುಹಂಚಿಕೆ ಮಾಡಿದ ರಾಜ್ಯಪಾಲರು​ , ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಲಂಚ ಪಡೆದ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ರಾಜ್ಯಪಾಲರು ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ತಮಿಳುನಾಡು ರಾಜಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

2014ರಲ್ಲಿ ಸಾರಿಗೆ ಇಲಾ​ಖೆ​ಯಲ್ಲಿ ನೌಕರಿ ನೀಡಲು ಲಂಚ ಪಡೆದ ಪ್ರಕ​ರ​ಣಕ್ಕೆ ಸಂಬಂಧಿ​ಸಿದ ಅಕ್ರಮ ಹಣ ವರ್ಗಾ​ವಣೆ ಕೇಸಿ​ನಲ್ಲಿ ತಮಿ​ಳು​ನಾ​ಡಿನ ಅಬ​ಕಾರಿ ಸಚಿವ ಹಾಗೂ ಪ್ರಭಾ​ವಿ ಡಿಎಂಕೆ ಮುಖಂಡ ಸೆಂಥಿಲ್‌ ಬಾಲಾಜಿ ಅವ​ರನ್ನು ಜಾರಿ ನಿರ್ದೇ​ಶ​ನಾ​ಲಯ (ಇ.ಡಿ.) ಬುಧ​ವಾರ ಬಂಧಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!