ಹೊಸ ದಿಗಂತ ಡಿಜಿಟಲ್ ಡೆಸ್ಕ್
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ಗೆ ಶಾಕ್ ಆಗಿದ್ದು, ಉಭಯ ರಾಜ್ಯಗಳಲ್ಲೂ ಪಕ್ಷದ ನಾಲ್ವರು ಪ್ರಮುಖ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಪವನ್ ಕುಮಾರ್ ಕಾಜಲ್ ಹಾಗೂ ಉಪಾಧ್ಯಕ್ಷ ಲಖ್ವಿಂದರ್ ಸಿಂಗ್ ರಾಣಾ ಕೇಸರಿ ಪಕ್ಷದ ಬಾವುಟ ಹಿಡಿದಿದ್ದಾರೆ. ಈ ಇಬ್ಬರೂ ಕೂಡ ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಸಮ್ಮುಖದಲ್ಲಿ ಕೇಸರಿ ಬಾವುಟ ಹಿಡಿದರು. ಪವನ್ ಮತ್ತು ಲಖ್ವಿಂದರ್ ಇಬ್ಬರೂ ಕಾಂಗ್ರೆಸ್ ಪಕ್ಷದಿಂದ ಎರಡು ಬಾರಿ ಗೆದ್ದು ಶಾಸಕರಾಗಿ ಆಯ್ಕೆಯಾಗಿದ್ದರು.
ಗುಜರಾತ್ನಲ್ಲೂ ಕಾಂಗ್ರೆಸ್ ತೊರೆದ ಇಬ್ಬರು:
ಗುಜರಾತ್ನಲ್ಲೂ ಇಬ್ಬರು ಹಿರಿಯ ನಾಯಕರು ಕಾಂಗ್ರೆಸ್ ತೊರೆದು, ಕಮಲ ಪಾಳಯಕ್ಕೆ ಸೇರ್ಪಡೆಯಾಗಿದ್ದಾರೆ. ನರೇಶ್ ರಾವಲ್ ಮತ್ತು ರಾಜು ಪರ್ಮಾರ್ ಅವರು ಗುಜರಾತ್ ಬಿಜೆಪಿ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ನೇತೃತ್ವದಲ್ಲಿ ಸೇರ್ಪಡೆಗೊಂಡರು.