ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಶಾಸಕ ವೈ.ಎಸ್ ವಿ ದತ್ತಾಗೆ ಬಂಧನದ ಭೀತಿ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 42 ನೇ ಎಂಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ.
ಎಸ್ ಸೋಮೇಗೌಡ ಎಂಬುವವರಿಂದ ಖಾಸಗಿ ದೂರು ದಾಖಲಾಗಿತ್ತು. ಕೋರ್ಟ್ ಗೆ ಗೈರಾದ ಹಿನ್ನೆಲೆ ನ್ಯಾಯಾಧೀಶೆ ಜೆ ಪ್ರೀತ್ ಜಾಮೀನು ರಹಿತ ವಾರೆಂಟ್ ಹೊರಡಿಸಿ ಆದೇಶ ನೀಡಿದ್ದಾರೆ.ಮಾರ್ಚ್ 27 ಕ್ಕೆ ದತ್ತಾರನ್ನು ಕೋರ್ಟ್ ಗೆ ಹಾಜರುಪಡಿಸಬೇಕು ಎಂದು ಬೆಂಗಳೂರು ಉತ್ತರ ವಿಭಾಗದ ಡಿಸಿಪಿಗೆ ಕೋರ್ಟ್ ಸೂಚನೆ ನೀಡಿದೆ.