ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆ ತೀವ್ರ ಹಿನ್ನೆಡೆಯಾಗಿದ್ದು, ತೃಣಮೂಲ ಕಾಂಗ್ರೆಸ್ನ ಇಬ್ಬರು ಹಾಲಿ ಸಂಸದರು ಶುಕ್ರವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬರಾಕ್ಪುರ ಸಂಸದ ಅರ್ಜುನ್ ಸಿಂಗ್ ಮತ್ತು ತಮ್ಲುಕ್ ಸಂಸದ ದಿಬ್ಯೇಂದು ಅಧಿಕಾರಿ ಇಂದು ಬಿಜೆಪಿ ಸೇರಿದ್ದಾರೆ.
ಲೋಕಸಭೆ ಚುನಾವಣೆಗೆ ಟಿಎಂಸಿಯ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟ ಕೆಲವೇ ದಿನಗಳಲ್ಲಿ ಟಿಎಂಸಿ ತೊರೆಯುವುದಾಗಿ ಅರ್ಜುನ್ ಸಿಂಗ್ ಘೋಷಿಸಿದ್ದರು.ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಸಹೋದರ, ತಾಮ್ಲುಕ್ ಅಧಿಕಾರಿ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.