ಪ್ರಜ್ವಲ್ ರೇವಣ್ಣಗೆ ಶಾಕ್ : ಭವಾನಿ ರೇವಣ್ಣ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ರನ ಪರವಾಗಿ ಹೈಕೋರ್ಟ್ ಗೆ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿದೆ.

ಹೊಸ ವಕೀಲರ ನೇಮಕಕ್ಕೆ ಭವಾನಿ ರೇವಣ್ಣ ಕಾಲಾವಕಾಶ ಕೋರಿ ಹೈಕೋರ್ಟ್ ಗೆ 7 ದಿನಗಳ ಕಾಲ ಕಾಲಾವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಎಸ್‌ಪಿಪಿ ಪ್ರೊ.ರವಿವರ್ಮ ಕುಮಾರ್ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ನ್ಯಾ.ಎಸ್ ವಿಶ್ವದಿತ್ ಶೆಟ್ಟಿ ಅವರಿಂದ ಹೈಕೋರ್ಟ್ ಪೀಠ ಭವಾನಿ ರೇವಣ್ಣ ಅವರು ಸಲ್ಲಿಸಿದ ಅರ್ಜಿಯನ್ನು ವಜಾ ಗೊಳಿಸಿ ಆದೇಶಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!