ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂಜಯ್ ರಾವತ್ ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಕ್ ನೀಡಿದ್ದು, ತನ್ನ ಸಂಸದೀಯ ಪಕ್ಷದ ನಾಯಕ ಸಂಜಯ್ ರಾವತ್ ಅವರನ್ನು ವಜಾಗೊಳಿಸಿದೆ .
ಇದರ ಜೊತೆಗೆ ಸಂಸದ ಗಜಾನನ್ ಕೀರ್ತಿಕರ್ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ ನೇಮಕ ಮಾಡಿದೆ.
ಶಿವಸೇನೆಯ ಮುಖ್ಯ ನಾಯಕರಾಗಿರುವ ಶಿಂಧೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಈ ಸಂಬಂಧ ಪತ್ರ ಬರೆದಿದ್ದು, ಕೀರ್ತಿಕರ್ ಅವರನ್ನು ಶಿವಸೇನೆಯ ಸಂಸದೀಯ ಪಕ್ಷದ ನಾಯಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಶಿವಸೇನೆ 18 ಸದಸ್ಯರನ್ನು ಹೊಂದಿದ್ದು, ನಾಲ್ವರು ಪಕ್ಷದ ನಿಯಂತ್ರಣವನ್ನು ಕಳೆದುಕೊಂಡ ಉದ್ಧವ್ ಠಾಕ್ರೆಯೊಂದಿಗೆ ತಮ್ಮ ನಿಷ್ಠೆಯನ್ನು ಹೊಂದಿದ್ದಾರೆ.