ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯೂಜಿಲ್ಯಾಂಡ್ ವಿರುದ್ಧ ಏಕದಿನ ಸರಣಿ ಗೆದ್ದು ಖುಷಿಯಲ್ಲಿರುವ ಟೀಮ್ ಇಂಡಿಯಾ ಟಿ20 (INDvsNZ T20) ಸರಣಿಯ ಸಜ್ಜಾಗುತ್ತಿದ್ದು, ಇದರ ನಡುವೆ ತಂಡಕ್ಕೆ ಆಘಾತ ಎದುರಾಗಿದೆ.
ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್ (Ruturaj Gaikwad) ಗಾಯದ ಸಮಸ್ಯೆಗೆ ಒಳಗಾಗಿದ್ದು ಟೂರ್ನಿಯಿಂದ ಹೊರಕ್ಕೆ ಬಿದಿದ್ದಾರೆ ವರದಿಯಾಗಿದೆ.
ಮಣಿಗಟ್ಟಿನ ನೋವಿನ ಸಮಸ್ಯೆಗೆ ಒಳಗಾಗಿದ್ದಾರೆ. ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದು ಅವರಲ್ಲಿ ಪುನಶ್ಚೇತನಕ್ಕೆ ಒಳಗಾಗಲಿದ್ದಾರೆ.
ಋತುರಾಜ್ ಗಾಯಕ್ವಾಡ್ ಪದೇಪದೆ ಗಾಯಗೊಳ್ಳುತ್ತಿರುವುದು ಟೀಮ್ ಇಂಡಿಯಾದ ಮ್ಯಾನೇಜ್ಮೆಂಟ್ಗೆ ತಲೆಬಿಸಿಯ ವಿಚಾರವಾಗಿ ಪರಿಣಮಿಸಿದೆ. ಆದಾಗ್ಯೂ ಅವರು ಸುಧಾರಿಸಿಕೊಂಡು ವಾಪಸ್ ಬರುವ ನಿರೀಕ್ಷೆಯಿದೆ. ಹೀಗಾಗಿ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೆ ಪರ್ಯಾಯ ಆಟಗಾರನನ್ನು ಆಯ್ಕೆ ಮಾಡಿಲ್ಲ.