ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ಬಿಜೆಪಿ ಹಾಗೂ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದ್ದು, ವಿಪಕ್ಷಗಳು ಇಂಡಿಯಾ ಮೈತ್ರಿ ಒಕ್ಕೂಟ ಒಗ್ಗಟ್ಟಿನಿಂದ ಹೋರಾಡಲು ನಿರ್ಧರಿಸಿದೆ.
ಇದರ ಬೆನ್ನಲ್ಲೇ ಮೈತ್ರಿಯಲ್ಲಿ ಒಡಕು ಮೂಡುತ್ತಿದ್ದು, ಕಾಂಗ್ರೆಸ್ಗೆ ಡಬಲ್ ಶಾಕ್ ಎದುರಾಗಿದೆ. ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಇಬ್ಬರು ಪ್ರಮುಖ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.
ರಾಜಸ್ಥಾನ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕಿ ಜ್ಯೋತಿ ಮಿರ್ಧಾ ಹಾಗೂ ಸವಾಯಿ ಸಿಂಗ್ ಚೌಧರಿ ಪಕ್ಷ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.
ಒಂದೆಡೆ ಅಶೋಕ್ ಗೆಹ್ಲೋಟ್ ಬಣ, ಮತ್ತೊಂದೆಡೆ ಸಚಿನ್ ಪೈಲೆಟ್ ಬಣ. ಎರಡೂ ಬಣದಲ್ಲಿ ಗುರುತಿಸಿಕೊಳ್ಳಲು ಇಷ್ಟವಿಲ್ಲದ ನಾಯಕರು ಇಕ್ಕಟ್ಟಿಗೆ ಸಿಲುಕಿದ್ದಾರೆ. ಇತ್ತೀಚೆಗೆ ರಾಜಸ್ಥಾನ ಸಚಿವ, ಕಾಂಗ್ರೆಸ್ ನಾಯಕ ರಾಜೇಂದ್ರ ಸಿಂಗ್ ಗುಧಾ ಶಿವಸೇನೆ ಪಕ್ಷ ಸೇರಿಕೊಂಡಿದ್ದಾರೆ.
ಜ್ಯೋತಿ ಮಿರ್ಧಾ ಹಾಗೂ ಸವಾಯಿ ಸಿಂಗ್ ಚೌಧರಿ ದೆಹಲಿಯಲ್ಲಿ ಬಿಜೆಪಿ ಸೇರಿಕೊಂಡಿದ್ದಾರೆ. ರಾಜಸ್ಥಾನ ಬಿಜೆಪಿ ರಾಜ್ಯಾಧ್ಯಕ್ಷ ಸಿಪಿ ಜೋಶಿ ಹಾಗೂ ದೆಹಲಿಯ ಕೆಲ ನಾಯಕರ ಸಮ್ಮುಖದಲ್ಲಿ ಇಬ್ಬರು ನಾಯಕರು ಬಿಜೆಪಿ ಸೇರಿಕೊಂಡಿದ್ದಾರೆ.