SHOCKING | ಕೊರೋನಾ ಸೋಂಕಿಗೆ ಮಂಗಳೂರಿನಲ್ಲಿ ಒಂದು ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೋವಿಡ್ ಗೆ 40 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ.

ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ ಘಟನೆ ನಡೆದಿದೆ. ಇದರೊಂದಿಗೆ  ಹೊಸ ಕ್ಯಾಲೆಂಡರ್ ವರ್ಷಕ್ಕೆ ಮುನ್ನವೇ ಕೋವಿಡ್ ಭೀತಿ ಆವರಿಸಿದೆ.

ಉತ್ತರ ಭಾರತದ 40 ವರ್ಷದ ವ್ಯಕ್ತಿಯೊಬ್ಬರು ಎರಡು ದಿನಗಳ ಹಿಂದೆಯಷ್ಟೇ ಕೊರೊನಾ ಪಾಸಿಟಿವ್ ಆಗಿ ನಗರದ ವೆನ್‌ಲಾಕ್ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇವರು ನಗರದಲ್ಲಿ ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದರು. ಮದ್ಯ ವ್ಯಸನಿಯಾಗಿದ್ದ ಇವರು ಮಧುಮೇಹದಿಂದಲೂ ಬಳಲುತ್ತಿದ್ದರು.

ಎರಡು ಸಕ್ರಿಯ ಪ್ರಕರಣ
ಜಿಲ್ಲೆಯಲ್ಲಿ ಶುಕ್ರವಾರ ಆರು ಮಂದಿಯನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!