SHOCKING | ಬಿಎಂಟಿಸಿ ಬಸ್‌ನಡಿ ಸಿಲುಕಿ ಯುವಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಎಂಟಿಸಿಗೆ ಮತ್ತೊಂದು ( Bmtc) ಬಲಿಯಾಗಿದೆ. ಬಿಎಂಟಿಸಿ ಬಸ್‌ನಡಿ ಸಿಲುಕಿ ಯುವಕನೊರ್ವ ಮೃತಪಟ್ಟಿದ್ದಾನೆ. ತೇಜಸ್ (22) ಮೃತ ದುರ್ದೈವಿ.

ಬೆಂಗಳೂರಿನ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಪೈನ್ ಅಪಾರ್ಟ್ಮೆಂಟ್ ಮುಂಭಾಗ ಈ ದುರ್ಘಟನೆ ನಡೆದಿದೆ. ಮೈಸೂರು ರಸ್ತೆಯಿಂದ ಉತ್ತರಹಳ್ಳಿ ‌ಕಡೆಗೆ ತೇಜಸ್‌ ಬೈಕ್‌ನಲ್ಲಿ‌ ಹೋಗುತ್ತಿದ್ದ. ಆ ವೇಳೆ ಎದುರಿಗೆ ಇದ್ದ ಬಸ್‌ ಅನ್ನು ಓವರ್ ಟೇಕ್ ಮಾಡಲು ಹೋಗಿದ್ದಾನೆ. ಆದರೆ ನಿಯಂತ್ರಣ ತಪ್ಪಿ ಬೈಕ್‌ನಿಂದ ಕೆಳ ಬಿದ್ದ ತೇಜಸ್ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಇದರಿಂದ ತೇಜಸ್‌ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ‌‌ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಬಿಎಂಟಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!