ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಗಿದ್ದಲ್ಲಿಯೇ ಯುವತಿಯೋರ್ವಳು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಬುಧವಾರ ನಡೆದಿದೆ.
ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರೆಂದು ಗುರುತಿಸಲಾಗಿದೆ.
ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದಾರೆ, ಮಧ್ವದಲ್ಲಿ ದೊಡ್ಡಮ್ಮನ ಮನೆಯಲ್ಲಿ ತಾಯಿ ಜತೆ ವಾಸವಿದ್ದು,ಮಂಗಳವಾರ ರಾತ್ರಿ ಊಟ ಮುಗಿಸಿ ತಾಯಿ ಜತೆ ಮಲಗಿದ್ದರು. ಬೆಳಗ್ಗೆ ಹೊತ್ತು ಕಳೆದರೂ ಏಳದಿರುವುದನ್ನು ಗಮನಿಸಿದ ತಾಯಿ ಎಬ್ಬಿಸುವಾಗ ಅವರು ಮೃತ ಪಟ್ಟಿರುವುದು ತಿಳಿದು ಬಂದಿದೆ.
ತಕ್ಷಣ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು,ಅಲ್ಲಿ ಪರೀಕ್ಷಿಸಿದ ವೈದ್ಯರು ಮಿತ್ರಾ ಮೃತಪಟ್ಟಿರುವುದನ್ನು ಧೃಢಪಡಿಸಿದರು..ಬಳಿಕ ಮರಣೋತ್ತರ ಪರೀಕ್ಷೆ ನಡೆಸಿದ್ದು, ಸಾವಿಗೆ ಹೃದಯಾಘಾತ ಕಾರಣವೆಂದು ವೈದ್ಯರು ತಿಳಿಸಿದ್ದಾರೆ.