SHOCKING | ನಡು ರಸ್ತೆಯಲ್ಲಿ ಮಹಿಳೆಯ ಬರ್ಬರ ಹತ್ಯೆ

ಹೊಸದಿಗಂತ ವರದಿ, ವಿಜಯಪುರ:

ನಡು ರಸ್ತೆಯಲ್ಲಿ ಮಹಿಳೆಯ ಕುತ್ತಿಗೆ ಕೊಯ್ದು ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ವಿಜಯಪುರ ರಸ್ತೆಯ ಸರೋವರ ದಾಬಾ ಬಳಿ ಗುರುವಾರ ಸಂಜೆ ನಡೆದಿದೆ.

ಇಲ್ಲಿನ ಗಂಗು ಬಾಗೇವಾಡಿ (25) ಮೃತಪಟ್ಟವಳು.

ಗಂಗು ಬಾಗೇವಾಡಿಗೆ ದುಷ್ಕರ್ಮಿಗಳು ಕುತ್ತಿಗೆ ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!