ಹೊಸದಿಗಂತ ವರದಿ, ಹುಬ್ಬಳ್ಳಿ:
ಪ್ರೀತಿಯ ನಿರಾಕರಣೆ ಮಾಡಿದ್ದ ಕಾರಣ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯನ ಮಗಳನ್ನು ಚಾಕುವಿನಿಂದ ಇರಿದು ಭೀಕರ ಕೊಲೆ ಮಾಡಿದ ಘಟನೆ ಗುರುವಾರ ವಿದ್ಯಾನಗರದ ಬಿವಿಬಿ ಕಾಲೇಜಿನ ಆವರಣದಲ್ಲಿ ನಡೆದಿದೆ.
ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಸುಪುತ್ರಿ ನೇಹಾ ಹಿರೇಮಠ ಕೊಲೆಯಾದ ಯುವತಿ. ಫಯಾಸ್ ಎಂಬ ಯುವಕ ಚಾಕುವಿನಿಂದ ಕುತ್ತಿಗೆ, ಬೆನ್ನಿನ ಭಾಗಕ್ಕೆ ಇರಿದು ಹತ್ಯೆ ಮಾಡಿದ್ದಾನೆ. ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಅಧ್ಯಯನ ಮಾಡುತ್ತಿದ್ದಳು. ಫಯಾಸ್ ಎಂಬಾತನ ಪ್ರೀತಿ ನಿರಾಕರಣೆ ಮಾಡಿದ್ದರಿಂದ ಹತ್ಯೆ ಮಾಡಲಾಗಿದೆ ಎನ್ನಲಾಗುತ್ತಿದೆ.
ವಿಷಯ ತಿಳಿಯುತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ಶವವನ್ನು ಕಿಮ್ಸ್ ಆಸ್ಪತ್ರೆ ರವಾನಿಸಿದ್ದಾರೆ. ಕೊಲೆ ಮಾಡಿದ ಫಯಾಸ್ ನನ್ನು ತಕ್ಷಣ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದರು.