ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಸಿಬ್ಬಂದಿಯೋರ್ವರನ್ನು ಟ್ರಕ್ ಕೆಳಗೆ ತಳ್ಳಿ ಬರ್ಬರವಾಗಿ ಹತ್ಯೆ ಮಾಡಿದ ಮತ್ತೊಂದು ಘಟನೆ ಗುಜರಾತ್ನ ಆನಂದ್ ಜಿಲ್ಲೆಯಲ್ಲಿ ನಡೆದಿದೆ.
ಗುರುಗ್ರಾಮದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ತಡೆಯಲು ಮುಂದಾಗಿದ್ದ ಡಿವೈಎಸ್ಪಿ ಮೇಲೆ, ರಾಂಚಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಮಹಿಳಾ ಸಬ್ ಇನ್ಸ್ಪೆಕ್ಟರ್ ಮೇಲೆ ಟ್ರಕ್ ಹರಿಸಿ ಹತ್ಯೆ ನಡೆಸಲಾದ ಬೆನ್ನೀಗೇ ಮತ್ತೊಂದು ಘಟನೆ ವರದಿಯಾಗಿದೆ.
ಬೋರ್ಸಾದ್ ಪಟ್ಟಣದ ಸಮೀಪ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ರಾಜಸ್ಥಾನ ನೋಂದಣಿ ಸಂಖ್ಯೆ ಹೊಂದಿದ್ದ ಟ್ರಕ್ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಅಧಿಕಾರಿಗಳು ನಿಲ್ಲಿಸಲು ಸೂಚನೆ ನೀಡಿದ್ದರು. ಈ ವೇಳೆ ಲಾರಿ ನಿಲ್ಲಿಸದೆ ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಕಿರಣ್ ಸಿಂಗ್ ರಾಜ್ (40) ಎಂಬವರ ಮೇಲೆ ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಕಾರಿಯಗದೆ ಅವರು ಮೃತಪಟ್ಟಿದ್ದಾರೆ. ಘಟನೆಯ ಬಗ್ಗೆ ತನಿಖೆ ತೀವ್ರಗೊಂಡಿದೆ ಎಂದು ಡಿವೈಎಸ್ಪಿ ಡಿ.ಎಚ್. ದೇಸಾಯಿ ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ