ಹೊಸದಿಗಂತ ಡಿಜಿಟಲ್ ಡೆಸ್ಕ್ :
ತ್ರಿಪುರ ಮಾಜಿ ಮುಖ್ಯಮಂತ್ರಿ, ಹರ್ಯಾಣದ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇವ್ ಕುಮಾರ್ ಕಾರು ಅಪಘಾತಕ್ಕೀಡಾಗಿದೆ.
ಹರಿಯಾಣದ ಪಾಣಿಪತ್ ಜಿಟಿ ರೋಡ್ ಬಳಿ ಸಂಚರಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದೆಹಲಿಯಿಂದ ಚಂಡೀಘಡಕ್ಕೆ ತೆರಳುತ್ತಿದ್ದ ಬಿಪ್ಲಬ್ ದೇಬ್ ಕುಮಾರ್ ಕಾರು, ಪಂಚರ್ ಆಗಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಬಿಪ್ಲಬ್ ದೇಬ್ ಸುರಕ್ಷಿತವಾಗಿದ್ದಾರೆ.
ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಕಾರು ಪಂಚರ್ ಆಗಿದೆ. ಹೀಗಾಗಿ ತಕ್ಷಣ ಕಾರು ನಿಲ್ಲಿಸಲಾಗಿದೆ. ಇದರಿಂದ ಹಿಂದಿನಿಂದ ಬರುತ್ತಿದ್ದ ಬಿಪ್ಲಬ್ ದೇಬ್ ಕಾರು ದಿಢೀರ್ ನಿಂತ್ರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಪಂಚರ್ ಆಗಿ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಈ ಕುರಿತು ಸೂಪರಿಡೆಂಟ್ ಆಫ್ ಪೊಲೀಸ್ ಒಮ್ ಪ್ರಕಾಶ್ ಮಾಹಿತಿ ನೀಡಿದ್ದಾರೆ.